ಪಂಗುಣಿ (Panguni) ಆಚರಣೆಯ ಅಂಗವಾಗಿ ಕಲ್ಯಾಣಿಯಲ್ಲಿ ಸ್ನಾನಕ್ಕೆಂದು ತೆರಳಿದ ಐವರು ಪುರೋಹಿತರು ನೀರಿನಲ್ಲಿ ಮುಳುಗಿ ಸಾವನ್ನಪಿರುವ ಘಟನೆ ತಮಿಳುನಾಡಿನ (Tamil Nadu) ನಂಗನಲ್ಲೂರಿನ ಧರ್ಮಲಿಂಗೇಶ್ವರ ದೇವಸ್ಥಾನದ ಬಳಿ ನಡೆದಿದೆ.
ಮೃತಪಟ್ಟವರನ್ನು ಸೂರ್ಯ (24), ರಾಘವನ್ (22), ಯೋಗೇಶ್ವರನ್ (23), ರಾಘವನ್ (18) ಹಾಗೂ ವನೇಶ್ (20) ಎಂದು ಗುರುತಿಸಲಾಗಿದೆ. ಪಂಗುಣಿ ಆಚರಣೆಯ ಅಂಗವಾಗಿ ನಂಗನಲ್ಲೂರಿನ ಧರ್ಮಲಿಂಗೇಶ್ವರ ದೇವಾಸ್ಥಾನದ ಪುರೋಹಿತರು 10:30ರ ವೇಳೆಗೆ ಸ್ನಾನಕ್ಕೆಂದು ಮೂವರಸಂಪೇಟ್ ದೇವಸ್ಥಾನದ ಬಳಿಯಿದ್ದ ಕಲ್ಯಾಣಿಗೆ ತೆರಳಿದ್ದರು. ಈ ವೇಳೆ ಒಬ್ಬರು ಕಾಲು ಜಾರಿ ಬಿದ್ದಿದ್ದಾರೆ. ಅವರನ್ನು ರಕ್ಷಿಸಲು ಹೋಗಿ ಇನ್ನುಳಿದವರು ಸಾವನ್ನಪ್ಪಿದ್ದಾರೆ. ಎಲ್ಲಾ ಶವಗಳನ್ನು ನೀರಿನಿಂದ ಹೊರತೆಗೆದಿದ್ದು, ಈ ಕುರಿತು ತನಿಖೆ ಕೈಗೊಂಡಿದ್ದೇವೆ ಎಂದು ಚೆನ್ನೈ (Chennai) ಪೊಲೀಸ್ ಕಮಿಷನರ್ ಶಂಕರ್ ಜಿವಾಲ್ ಹೇಳಿಕೆ ನೀಡಿದ್ದಾರೆ